ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಉತ್ತರ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆಡಳಿತಾರೂಢ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷದ ಮೇಲೆ ಹರಿಹಾಯ್ದಿದ್ದಾರೆ. ಆನೆ (ಬಿಎಸ್ಪಿ ಚುನಾವಣಾ ಚಿಹ್ನೆ) ಎಲ್ಲ ಹಣವನ್ನು ತಿಂದುಹಾಕಿದರೆ, ಸೈಕಲ್ (ಸಮಾಜವಾದಿ ಚುನಾವಣಾ ಚಿಹ್ನೆ) ಪಂಕ್ಚರ್ ಆಗಿ ನಿಂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.