ನಿನ್ನೆಯಿಂದ ಕರ್ನಾಟಕದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ನಡೆದ ಐಟಿ ದಾಳಿ ದೇಶಾದ್ಯಂತ ಹಲವು ವಿಶ್ನೇಷಣೆಗಳಿಗೆ ಎಡೆಮಾಡಿಕೊಟ್ಟಿದೆ. ಆಡಳಿತಾರೂಡ ಬಿಜೆಪಿ ಮತ್ತು ಅಹ್ಮದ್ ಪಟೇಲ್ ನಡುವಿನ ಸೇಡಿನ ರಾಜಕಾರಣಕ್ಕೆ ಡಿ.ಕೆ. ಶಿವಕುಮಾರ್ ಬಲಿಯಾದರಾ ಎಂಬ ಅನುಮಾನಗಳೂ ಕಾಡುತ್ತಿವೆ.