ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ಬಣಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ ಚುನಾವಣಾ ಆಯೋಗ ಸ್ಥಗಿತಗೊಳಿಸಿರುವ ಅಣ್ಣಾಡಿಎಂಕೆಯ ಎರಡು ಎಲೆ ಚಿಹ್ನೆಗಾಗಿ ಮಧ್ಯವರ್ತಿ ಮೂಲಕ ಚುನಾವಣಾ ಆಯೋಗಕ್ಕೆ ಲಂಚ ನೀಡಿಕೆ ಆರೋಪದಡಿ ಅಣ್ಣಾಡಿಎಂಕೆ ಮುಖಂಡ ಟಿಟಿವಿ ದಿನಕರನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 1.5 ಕೋಟಿ ರೂ. ಹಣದೊಂದಿಗೆ ಮಧ್ಯವರ್ತಿ ಚಂದ್ರಶೇಖರ್ ಎಂಬುವವನನ್ನ ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ದಿನಕರನ್`ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಬಂಧಿತನಿಂದ