ಡೆಹ್ರಾಡೂನ್ : ಕೇದಾರನಾಥ ಯಾತ್ರಾರ್ಥಿಗಳಿಗೆ ರಿಲಯನ್ಸ್ ಜಿಯೋ ಗುಡ್ ನ್ಯೂಸ್ ನೀಡಿದೆ. ಗೌರಿಕುಂಡ ಮತ್ತು ಕೇದಾರನಾಥ ನಡುವಿನ ಮಾರ್ಗದಲ್ಲಿ ಮೊಬೈಲ್ ಹಾಗೂ ಡೇಟಾ ಸೇವೆಗಳನ್ನು ಒದಗಿಸಲು ರಿಲಯನ್ಸ್ ಜಿಯೋ ಮುಂದಾಗಿದೆ.ರಿಲಯನ್ಸ್ ಜಿಯೋ ಗೌರಿಕುಂಡ ಮತ್ತು ಕೇದಾರನಾಥ ನಡುವಿನ ಮಾರ್ಗದಲ್ಲಿ ಮೊಬೈಲ್ ಮತ್ತು ಡೇಟಾ ಸೇವೆಗಳನ್ನು ಒದಗಿಸುತ್ತಿರುವ ಮೊದಲ ಟೆಲಿಕಾಂ ಆಪರೇಟರ್ ಆಗಿದೆ ಎಂದು ಕಂಪನಿಯು ತಿಳಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಸ್ಥಗಿತಗೊಂಡಿದ್ದ ಚಾರ್ ಧಾಮ್ ಯಾತ್ರೆ ಎರಡು ವರ್ಷಗಳ ಬಳಿಕ