ಗಾಂಧೀನಗರ : ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ನಲ್ಲಿ ಬಿಜೆಪಿಯನ್ನು ಸೋಲಿಸುವ ಕಾರ್ಯದಲ್ಲಿ ನಿರತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು,ಬಿಜೆಪಿಯವರೊಂದಿಗೆ ಸ್ಪರ್ಧೆ ಮಾಡಿ ಪೈಪೋಟಿ ನೀಡಲು ಶ್ರಮಿಸುತ್ತಿದ್ದೇನೆ ಹೊರತು ಪ್ರಧಾನಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.ಗುಜರಾತ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪ್ರಧಾನಿ ಹುದ್ದೆಗಳಿಗಾಗಿ ಇಲ್ಲಿಗೆ ಬಂದಿಲ್ಲ. ನಾನು ಭಾರತವನ್ನು ನಂ.1 ದೇಶವನ್ನಾಗಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. ದೆಹಲಿ ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ