ನವದೆಹಲಿ : 83ನೇ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ್ದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಜಾಪ್ರಭುತ್ವ ವ್ಯವ್ಯವಸ್ಥೆಯಲ್ಲಿ ಶಾಸನಗಳನ್ನು ರೂಪಿಸುವ ಸಂಸತ್ತೇ ಸಾರ್ವಭೌಮ. ಶಾಸನ ರಚನೆಯಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದರು.ಸಂಸತ್ತು ಸಂವಿಧಾನದ ‘ಮೂಲ ರಚನೆ’ಯನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ವಿಧಿಸಿರುವ ನಿರ್ಬಂಧವನ್ನು ನಾನು ಒಪ್ಪುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.ಈ ಹಿಂದೆ ಸಿಜೆಐ ಡಿ.ವೈ.ಚಂದ್ರಚೂಡ್