ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸುದೀಪ್ ಬಂಡೋಪಾಧ್ಯಾಯರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರಿಂದ ಆಕ್ರೋಶಗೊಂಡ ಟಿಎಂಸಿ ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಗೆ ತಾಕತ್ತಿದ್ರೆ ನನ್ನನ್ನು ಬಂಧಿಸಲಿ ಎಂದು ಸವಾಲ್ ಹಾಕಿದ್ದಾರೆ. ಪ್ರಧಾನಿ ಮೋದಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಗಳಿಂದ ನೋಟು ನಿಷೇಧ ವಿರೋಧಿಸುವ ತಮ್ಮ ರಾಜಕೀಯ ವಿರೋಧಿಗಳ ಮೇಲೆ ದಾಳಿ ಮಾಡಿಸುತ್ತಿದ್ದಾರೆ.ಇಂತಹ ಪೊಳ್ಳು ಬೆದರಿಕೆಗಳಿಗೆ ನಾನು ಹೆದರುವುದಿಲ್ಲ