ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರಿಗೆ ಬಡ್ತಿ ನೀಡಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸುವ ಬಗ್ಗೆ ಕೊಲಿಜಿಯಂ ಸಭೆ ಸೇರಿ ಶಿಫಾರಸು ಮಾಡಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಕೇವಲ ಊಹಾಪೋಹವಾಗಿದ್ದು ತೀರಾ ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ವ್ಯಾಖ್ಯಾನಿಸಿದ್ದಾರೆ. ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯು ಪವಿತ್ರವಾದುದಾಗಿದ್ದು ಅದಕ್ಕೆ ಅದರದ್ದೇ ಆದ ಘನತೆ ಇದೆ. ಮಾಧ್ಯಮಗಳು ಅದರ ಪಾವಿತ್ರ್ಯತೆಯನ್ನು ಅರ್ಥಮಾಡಿಕೊಂಡು ಗೌರವಿಸಬೇಕು ಎಂದು ಸಹ ಮುಖ್ಯ ನ್ಯಾಯಮೂರ್ತಿಗಳು