ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ ಆರು ಪ್ರಕರಣಗಳಲ್ಲಿ ಒಂದು ಪ್ರಕರಣದ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಂಚಿಯಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಶಿವಪಾಲ್ ಸಿಂಗ್ ಅವರಿಂದ ಈ ತೀರ್ಪು ಪ್ರಕಟವಾಗಲಿದೆ.