ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 8 ರು. ಹಾಗೂ ಡೀಸೆಲ್ ಮೇಲಿನ ಸುಂಕವನ್ನು 6 ರು. ಕಡಿತ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು, ‘ಇದು ಯಾತಕ್ಕೂ ಸಾಲದು’ ಎಂದು ಟೀಕಿಸುತ್ತಿರುವ ಕಾಂಗ್ರೆಸ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿರುಗೇಟು ನೀಡಿದ್ದಾರೆ.