ಬೆಂಗಳೂರು : ರೈತರ ಸಂಕಷ್ಟಕ್ಕೆ ಎಂದೂ ಸ್ಪಂದಿಸದ ಗುಜರಾತ್ ಮೂಲದ ಪ್ರಧಾನಿ ನರೇಂದ್ರ ಮೋದಿ ಅವರು ರೈತಪರ ಹೋರಾಟ ನಡೆಸಿದ್ದ ಮಹಾತ್ಮಾ ಗಾಂಧೀಜಿ ಅವರನ್ನು ತಮ್ಮವರು ಎಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 10 ತಿಂಗಳುಗಳಿಂದ ರೈತರು ಗಾಂಧಿ ಆದರ್ಶವಾದ ಅಹಿಂಸೆ ಮೂಲಕ ಹೋರಾಟ ನಡೆಸುತ್ತಿದ್ದರೂ ಪ್ರಧಾನಿಯವರು