ತಿರುವನಂತಪುರಂ:ವಾಡಿಕೆಗಿಂತ ಎರಡು ದಿನ ಮೊದಲೇ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗಿತ್ತಿದೆ. ಈ ನಿಟ್ಟಿನಲ್ಲಿ ಜೂನ್3ರಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳ ಮಾತ್ರವಲ್ಲದೇ ತಮಿಳುನಾಡಿನ ದಕ್ಷಿಣ ಮತ್ತು ಪಶ್ಚಿಮ ಭಾಗಗಳು, ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳಲ್ಲೂ ನೈರುತ್ಯ ಮುಂಗಾರು ಮಳೆ ಸುರಿಸಿದೆ. ಬಾಂಗ್ಲಾದೇಶ ಕರಾವಳಿಯನ್ನು ಮಂಗಳವಾರ ಹಾದು ಹೋದ