ನವದೆಹಲಿ: ನಿನ್ನೆ ಜಮ್ಮು ಕಾಶ್ಮೀರದ ಆವಂತಿಪೋರಾದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರರು ನಡೆಸಿದ ಪೈಶಾಚಿಕ ಕೃತ್ಯದಲ್ಲಿ 43 ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆಗೆ ತಕ್ಕ ಪ್ರತೀಕಾರ ಕೊಡುತ್ತೇವೆ ಎಂದು ಪ್ರಧಾನಿ ಮೋದಿ ಆಕ್ರೋಶದಿಂದಲೇ ಹೇಳಿದ್ದಾರೆ.