ನವದೆಹಲಿ: ನಿನ್ನೆ ಜಮ್ಮು ಕಾಶ್ಮೀರದ ಆವಂತಿಪೋರಾದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರರು ನಡೆಸಿದ ಪೈಶಾಚಿಕ ಕೃತ್ಯದಲ್ಲಿ 43 ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆಗೆ ತಕ್ಕ ಪ್ರತೀಕಾರ ಕೊಡುತ್ತೇವೆ ಎಂದು ಪ್ರಧಾನಿ ಮೋದಿ ಆಕ್ರೋಶದಿಂದಲೇ ಹೇಳಿದ್ದಾರೆ.ಆತ್ಮಾಹುತಿ ಬಾಂಬರ್ ಸ್ಕಾರ್ಪಿಯೋ ಕಾರ್ ನಲ್ಲಿ 350 ಕೆಜಿ ಸ್ಪೋಟಕಗಳನ್ನು ತುಂಬಿಸಿಕೊಂಡು ಸಿಆರ್ ಪಿಎಫ್ ಯೋಧರು ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿ 43 ಯೋಧರ ಮಾರಣ ಹೋಮ ನಡೆಸಿದ್ದರು.ಇದು ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ.