ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಅಗ್ನಿವೀರರಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಭಾರತೀಯ ಸೇನೆ ಪ್ರತಿಕ್ರಿಯೆ ನೀಡಿದೆ. ಅಗ್ನಿವೀರರಿಗೆ ಒಟ್ಟು 1.13 ಕೋಟಿ ರೂ. ಪರಿಹಾರ ಸಿಗುತ್ತದೆ ಎಂದು ತಿಳಿಸುವ ಮೂಲಕ ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳು ಎಂದು ಸೇನೆ ಪರೋಕ್ಷವಾಗಿ ಹೇಳಿದೆ. ಸಿಯಾಚಿನ್ನಲ್ಲಿ ಹುತಾತ್ಮರಾದ ಅಗ್ನಿವೀರ್ ಅಕ್ಷಯ್ ಲಕ್ಷ್ಮಣ್ಗೆ ಸಂತಾಪ ಸೂಚಿಸಿದ್ದ ರಾಹುಲ್ ಗಾಂಧಿ, ಒಬ್ಬ ಯೋಧ ಹುತಾತ್ಮರಾಗಿದ್ದಾರೆ.