ರಾಯ್ ಬರೇಲಿ: ಸೋನಿಯಾ ಗಾಂಧಿ ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ರಾಯ್ ಬರೇಲಿಯಲ್ಲಿ ಉಷ್ಣವಿದ್ಯುತ್ ನಿಗಮ (ಎನ್ ಟಿಪಿಸಿ) ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಗುಜರಾತ್ ಪ್ರವಾಸಕ್ಕೆ ತೆರಳಲಿದ್ದ ರಾಹುಲ್ ಗಾಂಧಿ ತಮ್ಮ ಪ್ರವಾಸ ಮೊಟಕುಗೊಳಿಸಿ ರಾಯ್ ಬರೇಲಿಗೆ ತೆರಳಿದ್ದಾರೆ. ಸಂತ್ರಸ್ತರನ್ನು ಕಂಡ ಮೇಲೆ ಗುಜರಾತ್ ಗೆ ಮರಳುವುದಾಗಿ ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.800