ಜಯಲಲಿತಾ ನಿಧನದಿಂದ ತೆರವಾಗಿದ್ದ ಚೆನ್ನೈನ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗಂಗೈ ಅಮರನ್ ಇತ್ತೀಚೆಗೆ ಸೂಪರ್ ಸ್ಟಾರ್ ರಜಿನಿಕಾಂತ್ ಅವರನ್ನ ಭೇಟಿ ಮಾಡಿದ್ದರು. ಸಂಗೀತ ನಿರ್ದೇಶಕರಾಗಿರುವ ಗಂಗೈ ಅಮರನ್ ಅದೇ ಸಲುಗೆಯಲ್ಲಿ ರಜಿನಿಕಾಂತ್ ಮನೆಗೆ ಭೇಟಿ ನೀಡಿದ್ದರು. ಆದರೆ, ಈ ಭೇಟಿ ಬಳಿಕ ರಜಿನಿ ಬಿಜೆಪಿಯನ್ನ ಬೆಂಬಲಿಸುತ್ತಾರೆ ಎಂಬ ಸುದ್ದಿ ಹರಡಿತ್ತು.