ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಬೀಗುತ್ತಿರುವ ಬಿಜೆಪಿಯ ಹಿರಿಯ ನಾಯಕರು ಮತದಾರರಲ್ಲಿ ಜಾಗೃತಿ ಮೂಡಿಸಿದ್ದಕ್ಕಾಗಿ, ಬಾಬಾ ರಾಮದೇವ್ ಅವರಿಗೆ ಧನ್ಯವಾದ ಗಳನ್ನು ಅರ್ಪಿಸಿದರಲ್ಲದೆ, ಅವರ ಪ್ರಯತ್ನಗಳನ್ನು ರಾಷ್ಟ್ರೀಯ ನಾಯಕರಾದ ಮಹಾತ್ಮ ಗಾಂಧಿ ಮತ್ತು ಪ್ರಕಾಶ್ ನಾರಾಯಣ್ ಕೈಗೊಂಡ ಹೋರಾಟಗಳಿಗೆ ಹೋಲಿಸಿದ್ದಾರೆ. ಮತದಾರರಲ್ಲಿ ಜಾಗೃತಿಯನ್ನು ಕೈಗೊಳ್ಳಲು ಬಾಬಾ ಕೈಗೊಂಡ ಪ್ರಯತ್ನಗಳು ಮಹಾತ್ಮಾ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣರ ಹೋರಾಟದಂತಿದ್ದವು ಎಂದು ಪಕ್ಷದ ನಾಯಕ ಜೇಟ್ಲಿ ಹೇಳಿದ್ದಾರೆ.