ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದ ಆರೆಸ್ಸೆಸ್, ಬಿಜೆಪಿ ಸಮನ್ವಯ ಸಭೆಯಲ್ಲಿ ಪ್ರಧಾನಿ ಮೋದಿ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮೋದಿ ಸರಕಾರದ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದ ಆರೆಸ್ಸೆಸ್, ಕೇಂದ್ರ ಸರಕಾರದ ಆರ್ಥಿಕ ನೀತಿಯ ವೈಫಲ್ಯತೆ ಕುರಿತು ತರಾಟೆಗೆ ತೆಗೆದುಕೊಂಡಿದೆ. ಉದ್ಯೋಗ ಸೃಷ್ಚಿಯಲ್ಲಿ ಕೂಡಾ ಕೇಂದ್ರ ಸರಕಾರ ವಿಫಲವಾಗಿದೆ. ಚುನಾವಣೆ ಸಂದರ್ಭದಲ್ಲಿ ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.