ನವದೆಹಲಿ : ಇತ್ತಿಚೆಗೆ ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುವವರಲ್ಲಿ ಬೈಕ್ ಸವಾರರ ಸಂಖ್ಯೆ ಅತಿ ಹೆಚ್ಚಾಗಿದ್ದು, ಇದಕ್ಕೆ ಕಾರಣ ಅವರು ಧರಿಸಿರುವ ಕಳಪೆ ಗುಣಮಟ್ಟದ ಹಲ್ಮೆಟ್ ಗಳಾಗಿವೆ. ಈ ಬಗ್ಗೆ ಮನಗೊಂಡ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ರಾಜ್ಯಸಭಾ ಸಂಸದ ಸಚಿನ್ ತೆಂಡುಲ್ಕರ್ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.