ಮುಖ್ಯಮಂತ್ರಿ ಪದವಿಗೇರಲು ಶತಾಯಗತಾಯ ಪ್ರಯತ್ನ ನಡೆಸಿರುವ ಶಶಿಕಲಾ ನಟರಾಜನ್ ಮತ್ತು ದಿವಂಗತ ಸಿಎಂ ಜಯಲಲಿತಾ ಮತ್ತು ಇತರ ಇಬ್ಬರ ಮೇಲಿರುವ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಇಂದು ಹೊರಬೀಳುವ ಸಾಧ್ಯತೆಗಳಿವೆ. ಒಂದು ವೇಳೆ ಸುಪ್ರೀಂ ಶಶಿಕಲಾ ಅವರನ್ನು ಅಪರಾಧಿ ಎಂದು ಪರಿಗಣಿಸಿದ್ದಲ್ಲಿ ಅವರು ಜೈಲು ಸೇರುವುದು ಖಚಿತ. ಹೀಗಾಗಿ ಶಶಿಕಲಾ ಅವರ ರಾಜಕೀಯ ಮಹಾತ್ವಾಕಾಂಕ್ಷೆಯ ಹಾದಿ ದುರ್ಗಮವಾಗಿರುವುದಂತೂ ಸತ್ಯ.