ತಿರುವನಂತಪುರಂ : ಇಲ್ಲಿಂದ ಶಾರ್ಜಾಗೆ 170 ಪ್ರಯಾಣಿಕರೊಂದಿಗೆ ಸೋಮವಾರ ಸಂಚಾರ ಆರಂಭಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸಾಯಿತು. ವಿಮಾನದಲ್ಲಿ ಆರು ಮಂದಿ ಸಿಬ್ಬಂದಿ ಇದ್ದರು. ತಾಂತ್ರಿಕ ದೋಷ ಕಾಣಿಸಿಕೊಂಡಿದ್ದನ್ನು ಗುರುತಿಸಿದ ಅವರು ವಿಮಾನ ವನ್ನು ಸರುಕ್ಷಿತವಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಳಿಸಿದರು. ನಂತರ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಿ ಕಳುಹಿಸಲಾಯಿತು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್(ಎಐಇ) ವಕ್ತಾರರು