ಹೊಸದಿಲ್ಲಿ, ಸೆ.15 : ಗೋಧ್ರಾ ದಂಗೆ ಪ್ರಕರಣಗಳ ನ್ಯಾಯಾಂಗ ಪೂರ್ವ ನಿದರ್ಶನದಿಂದ ಅಂಶವೊಂದನ್ನು ಮಾದರಿಯಾಗಿ ತೆಗೆದುಕೊಂಡಿರುವ ದಿಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಈಶಾನ್ಯ ದಿಲ್ಲಿ ದಂಗೆಗಳ ಸಂದರ್ಭದಲ್ಲಿ 24ರ ಹರೆಯದ ಯುವಕನ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಧರ್ಮಗಳಿಗೆ ಅನುಗುಣವಾಗಿ ವಿಚಾರಣೆಯನ್ನು ಪ್ರತ್ಯೇಕಗೊಳಿಸುವಂತೆ ಮಂಗಳವಾರ ಆದೇಶಿಸಿದೆ.