ತಿರುವನಂತಪುರಂ, ಸೆ 8: ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೆಲವು ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ. ಮಂಗಳವಾರ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ನಿರ್ಬಂಧಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಸಡಿಲಗೊಳಿಸಲು ಸೂಚಿಸಿದೆ.