ನವದೆಹಲಿ : ಲಂಡನ್ನಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಇಂದು ಸಂಸತ್ ಅಧಿವೇಶನವನ್ನು ಬಲಿ ತೆಗೆದುಕೊಂಡಿದೆ. ಎರಡನೇ ಅವಧಿಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸದನ ಆರಂಭವಾಗುತ್ತಿದ್ದಂತೆ ಗದ್ದಲಕ್ಕೆ ವೇದಿಕೆಯಾಯಿತು.