ತಮ್ಮ ಪಕ್ಷದೊಳಗೆ ಎದ್ದಿರುವ ಆಂತರಿಕ ಕಲಹದಿಂದ ರೋಸಿ ಹೋಗಿರುವ ಮುಲಾಯಂ ಸಿಂಗ್ ಯಾದವ್ ರಾಜ್ಯದಲ್ಲಿ ಹೇಗಾದರೂ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎಂಬ ಹವಣಿಕೆಯಲ್ಲಿರುವಂತಿದೆ. ಮಂಗಳವಾರ ಕಾಂಗ್ರೆಸ್ನ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರನ್ನು ಮುಲಾಯಂ ಭೇಟಿಯಾಗಿದ್ದು ಅವರು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಮನೆ ಮಾಡಿದೆ.