ಆನೆಗುಡ್ಡೆ ವಿನಾಯಕ ದೇವಸ್ಥಾನ ಕುಂಬಾಶಿಯು ಕುಂದಾಪುರಕ್ಕೆ 9 ಕಿಮೀ ದೂರದಲ್ಲಿ ನೆಲೆಗೊಂಡಿದೆ. ಮಹಾಲಿಂಗೇಶ್ವರ ಮತ್ತು ಆನೆಗುಡ್ಡೆ ವಿನಾಯಕ ಮಂದಿರಗಳಿಗೆ ಇದು ಪ್ರಖ್ಯಾತಿ ಪಡೆದಿದೆ. ಈ ಸ್ಥಳದ ಹೆಸರು ಕುಂಬಾಸುರನಿಂದ ಜನ್ಯವಾಗಿದೆ. ಶಾಸನಗಳಲ್ಲಿ ಕುಂಭಾ-ಕಾಶಿ ಎಂದೇ ಈ ಸ್ಥಳವನ್ನು ವರ್ಣಿಸಲಾಗಿದೆ. ಪರಶುರಾಮ ಸೃಷ್ಟಿ ಎಂದು ಕರೆಯುವ ಏಳು ಸ್ಥಳಗಳ ಪೈಕಿ ಇದೂ ಕೂಡ ಯಾತ್ರಾಸ್ಥಳವಾಗಿದೆ.