ಮಂಗಳೂರಿನಿಂದ 20 ಕಿಮೀ ದೂರವಿರುವ ಕಟೀಲಿನ ಜನಪ್ರಿಯ ದುರ್ಗಾಪರಮೇಶ್ವರಿ ದೇವಾಲಯವು ನಂದಿನಿ ನದಿಯ ಮಧ್ಯದಲ್ಲಿ ನೆಲೆಗೊಂಡಿದೆ. ಕಟೀಲು ಹೆಸರು ಎರಡು ಪದಗಳಿಂದ ಜನ್ಯವಾಗಿದೆ. ಕಟಿ ಎಂದರೆ ನಡು(ಸೊಂಟ), ಇಳೆ ಎಂದರೆ ಭೂಮಿ. ಕಟೀಲ್ ಎಂದರೆ ಭೂಮಿಯ ನಡುವಿನ ಪ್ರದೇಶವೆಂದು ಅರ್ಥ. ಪೌರಾಣಿಕ ಇತಿಹಾಸ: ಅರುಣಾಸುರ ರಾಕ್ಷಸನಾಗಿದ್ದು ಪ್ರಬಲನಾಗಿ ಬೆಳೆದು ಭೂಮಿಯ ಶಾಂತಿಯನ್ನು ಕದಡಿದ್ದ. ದೇವರುಗಳು ಕೂಡ ಅಸಹಾಯಕರಾಗಿದ್ದರು. ಎರಡು ಅಥವಾ ನಾಲ್ಕು ಕಾಲುಗಳ ಜೀವಿಗಳಿಂದ ತಾನು ಸಾಯಬಾರದೆಂದು ಅರುಣಾಸುರ