ದಸರಾವನ್ನು ಮೈಸೂರು ಸ್ವಾಗತಿಸಿದರೆ... ಮಡಿಕೇರಿ ಬೀಳ್ಕೊಡುತ್ತದೆ... ಈ ಮಾತು ಅಕ್ಷರಶಃ ನಿಜ. ಮೈಸೂರಿನಲ್ಲಿ ಹಗಲು ನಡೆಯುವ ಜಂಬೂಸವಾರಿ ಗತ ದಿನಗಳ ರಾಜವೈಭವವನ್ನು ಕಣ್ಮುಂದೆ ತಂದರೆ, ಮಡಿಕೇರಿಯಲ್ಲಿ ರಾತ್ರಿ ನಡೆಯುವ ದಶಮಂಟಪಗಳ ಮೆರವಣಿಗೆ ದೇವಲೋಕಕ್ಕೆ ಕರೆದೊಯ್ಯುತ್ತದೆ.