ಬೆಂಗಳೂರು: 2024 ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಗೆ ರಾಜ್ಯದ ಪ್ರತಿಭೆಗಳನ್ನು ಗುರುತಿಸಿ ತರಬೇತಿ ನಡೆಸುವ ಕೆಲಸಕ್ಕೆ ರಾಜ್ಯ ಸರ್ಕಾರ ಈಗಲೇ ಅಡಿಗಲ್ಲು ಹಾಕಿದೆ.ಒಲಿಂಪಿಕ್ಸ್ ಗೆ ಆಟಗಾರರನ್ನು ತಯಾರುಗೊಳಿಸುವ ನಿಟ್ಟಿನಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.ಮುಂದಿನ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪದಕ ಪಟ್ಟಿಯಲ್ಲಿ ಟಾಪ್ 10 ರೊಳಗೆ ತರಬೇಕು. ಪದಕ ಗೆದ್ದವರಲ್ಲಿ ಹೆಚ್ಚಿನವರು ಕರ್ನಾಟಕದವರೇ ಆಗಬೇಕು ಎಂದು