ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಜನರಿಗೆ ಮೂಡಿಸಿದ್ದ ಕುತೂಹಲಕ್ಕೆ ತಕ್ಕ ಪ್ರದರ್ಶನ ಕಾಣುವಲ್ಲಿ ವಿಫಲವಾಗಿದೆ.ಕಾರಣ ಮೊದಲ ಎಪಿಸೋಡ್ ನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಕರೆಸಿದ್ದು ಬಿಟ್ಟರೆ, ಉಳಿದೆಲ್ಲಾ ಎಪಿಸೋಡ್ ನಲ್ಲಿ ಸಿನಿಮಾ ಕಲಾವಿದರನ್ನು ಮಾತ್ರ ಕರೆಸಿ ಸಾಧಕರೆಂದು ಪರಿಚಯಿಸಲಾಗುತ್ತಿದೆ.ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಕರೆಸುತ್ತಿಲ್ಲ ಎನ್ನುವುದು ವೀಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಪ್ರೇಮಾ, ರಾಘವೇಂದ್ರ ರಾಜ್ ಕುಮಾರ್, ಪ್ರಕಾಶ್ ಬೆಳವಾಡಿ,