ಶ್ರೀನಗರ : ಪರಿಸರದಲ್ಲಿ ಪ್ರತಿಕೂಲ ವಾತಾವರಣ ಉಂಟಾಗಿರುವುದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ನ ನುನ್ವಾನ್ ಶಿಬಿರದಿಂದ ಪವಿತ್ರ ಗುಹೆಯತ್ತ ತೆರಳಲು ಯಾತ್ರಾರ್ಥಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಕಳೆದ ಗುರುವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಮೂಲ ಶಿಬಿರವನ್ನು ತಲುಪಿತ್ತು. ಕೋವಿಡ್ ಕಾರಣದಿಂದಾಗಿ ಸತತ ಎರಡು ವರ್ಷ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಈ ಬಾರಿ ಮತ್ತೆ