ಕಳೆದ ಕೆಲವು ದಿನಗಳ ಹಿಂದೆ ರಷ್ಯಾದ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದ. ಈ ಘಟನೆಯ ಬೆನ್ನಲ್ಲೇ ಇಂದು ಮತ್ತೋರ್ವ ವಿದ್ಯಾರ್ಥಿಗೆ ಗುಂಡು ತಗುಲಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರಾಗಿರುವ ಜನರಲ್ (ನಿವೃತ್ತ) ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಪೋಲಂಡ್ನಲ್ಲಿ ಅವರು ಎಎನ್ಐನೊಂದಿಗೆ ಮಾತನಾಡಿದರು. ‘ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ.