ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ನಲ್ಲಿ ಎದ್ದಿರುವ ಭಿನ್ನಮತದ ಲಾಭ ಪಡೆಯಲು ಬಿಜೆಪಿ ಯತ್ನ ನಡೆಸಿದ್ದು, ಜಾರಕಿಹೊಳಿ ಸಹೋದರರನ್ನು ಪಕ್ಷಕ್ಕೆ ಕರೆತರಲು ಯತ್ನ ನಡೆಸಿದೆ.ಪಿಎಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ವಿರುದ್ಧ ಹಿನ್ನಡೆ ಅನುಭವಿಸಿದ್ದರಿಂದ ಜಾರಕಿಹೊಳಿ ಸಹೋದರರು ಈಗ ಅಸಮಾಧಾನ ಹೊಂದಿದ್ದಾರೆ. ಇದನ್ನೇ ಲಾಭವಾಗಿಸಲು ಬಿಜೆಪಿ ಯತ್ನ ನಡೆಸುತ್ತಿದೆ.ಈಗಾಗಲೇ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಲ್ಲಿದ್ದಾರೆ. ಇನ್ನು, ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿಯನ್ನೂ ಬಿಜೆಪಿಗೆ ಕರೆತರಲು ರಾಜ್ಯ ನಾಯಕರು ಯತ್ನ ನಡೆಸಿದ್ದಾರೆ.