ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಜಿ.ಎಲ್.ನರಸಿಂಹರಾವ್ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ದೇಶದಲ್ಲಿಯೇ ಅತ್ಯಂತ ಹೆಚ್ಚು ಭ್ರಷ್ಟಾಚಾರ ನಡೆದಿರೋದು ಕರ್ನಾಟಕದಲ್ಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕಳೆದ ಐದು ವರ್ಗಗಳಿಂದ ಆಡಳಿತ ನಡೆಸುತ್ತಿದೆ. ಆದ್ರೆ ಜನಪರವಾದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಮಾತ್ರ ಶೂನ್ಯ. ಹೀಗಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ರು.