ಬೆಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಹೇಳಿ ಕಲಾಪದ ವೇಳೆ ಸದಸದಿಂದ ಹೊರನಡೆದ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ವಿಚಾರವಾಗಿ ಬಿಜೆಪಿ ಡೆಡ್ಲೈನ್ ಕೊಡಲು ಸಾಧ್ಯವಿಲ್ಲ. ಬಹುಮತ ಸಾಬೀತು ವೇಳೆ ವಾಕ್ ಔಟ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ರೈತರು ಶಾಂತಿಯುತವಾಗಿ ವರ್ತಿಸಬೇಕು.