ಬೆಂಗಳೂರು: ಎರಡು ದಿನ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾಗ ಹೆಲಿಕಾಪ್ಟರ್ ಪ್ರಯಾಣಕ್ಕೆ 13 ಲಕ್ಷ ರೂ. ಖರ್ಚು ಮಾಡಿದ್ದರು ಎಂಬ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮಾಜಿ ಸಿಎಂ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.ನಾವು ವೆಚ್ಚ ಕಡಿವಾಣಕ್ಕೆ ಪ್ರಯತ್ನಿಸುತ್ತಿದ್ದೇವೆ. ವಿಶೇಷ ವಿಮಾನದಲ್ಲಿ ಪ್ರಯಾಣಿಸಲ್ಲ. ಆದರೆ ಹಿಂದಿದ್ದ ಮುಖ್ಯಮಂತ್ರಿಗಳು ತಮ್ಮ ಎರಡು ದಿನದ ಪ್ರಯಾಣಕ್ಕೆ 13 ಲಕ್ಷ ಬಿಲ್ ಹಾಕಿದ್ದರು.ಇದಕ್ಕೆ ಯಾರು ಹೊಣೆ ಎಂದು ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದರು.ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ