ಹಾಸನ : ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆಯಿಂದ ಫಸಲು ಹಾನಿಯಾಗಿರುವುದಷ್ಟೇ ಅಲ್ಲದೇ ಸಾಗಣೆ ವೆಚ್ಚ ಅಧಿಕವಾಗಿ ತರಕಾರಿ ದರ ಗಗನಕ್ಕೇರಿದೆ. ಇಂಧನ ದರ, ಎಲ್ಪಿಜಿ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಗ್ರಾಹಕರಿಗೆ ತರಕಾರಿ ತುಟ್ಟಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಆರ್ಭಟಿಸುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ತರಕಾರಿಗಳು ಕೊಳೆಯುತ್ತಿವೆ. ಫಸಲು ಮಣ್ಣು ಪಾಲಾಗುತ್ತಿರುವುದು ತರಕಾರಿ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣ