ಬೆಂಗಳೂರು(ಜು.15): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಗೆ ತೆರಳಲಿದ್ದು, ಅದೇ ದಿನ ರಾತ್ರಿ ಅಥವಾ ಶನಿವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಉದ್ದೇಶ ಹೊಂದಿದ್ದಾರೆ.