ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ.ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದಲ್ಲೂ ಭರ್ಜರಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಿರ್ಧರಿಸಿದೆ.ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ