ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ನಾಯ್ಕ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ ಎನ್ನುವ ವದಂತಿ ಹರಡುತ್ತಿದ್ದಂತೆ ಬೆಂಬಲಿಗರು ಟೈರ್ಗಳಿಗೆ ಬೆಂಕಿ ಹಚ್ಚಿ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ವರದಿಯಾಗಿದೆ. ದಾವಣಗೆರೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು ಮಾಯಕೊಂಡ ಕ್ಷೇತ್ರದ ಟಿಕೆಟ್ ತಪ್ಪುವ ಮಾಹಿತಿಯಿಂದ ಗರಂ ಆಗಿರುವ ನಾಯ್ಕ ಶಾಸಕರ ಬೆಂಬಲಿಗರು ರಸ್ತೆ ತಡೆ ನಡೆಸಿ ಭಾರಿ ಆಕ್ರೋಶ ವ್ಯಕ್ತಪಡಿಸಿದರು. ಮೂಲ ಬಿಜೆಪಿ