ಮುಂಬೈ/ಪುಣೆ(ಜು.18): ಲಸಿಕೆಯ ಎರಡೂ ಡೋಸ್ ಪಡೆದವರಲ್ಲೂ ಸೋಂಕು ಕಾಣಿಸಿಕೊಳ್ಳಲು ಕಾರಣವೇನು ಎಂದು ತಿಳಿಯಲು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆ, ಕರ್ನಾಟಕದ 181 ಸೋಂಕಿತರಿ ಸೇರಿದಂತೆ ದೇಶದ 244 ಸೋಂಕಿತರನ್ನು ಪರೀಕ್ಷೆಗೆ ಒಳಪಡಿಸಿದೆ. ಈ ವೇಳೆ ಡೆಲ್ಟಾತಳಿಯ ವೈರಸ್ ಮೇಲೆ ಲಸಿಕೆ ಶೇ.99ರಷ್ಟುಪರಿಣಾಮಕಾರಿಯಾಗಿದ್ದು, ಸಾವಿನಿಂದ ಅವರನ್ನು ರಕ್ಷಿಸಿದೆ ಎಂಬ ಮಹತ್ವದ ಅಂಶ ದೃಢಪಟ್ಟಿದೆ.