ಬಂಗಾಳ ಕೊಲ್ಲಿಯಿಂದ ಆರಂಭಗೊಂಡಿದ್ದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡ ಹಿನ್ನೆಲೆ ರಾಜ್ಯದಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಬ್ರೇಕ್ ಬಿದಿತ್ತು. ಈಗಾಗಲೇ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ನವೆಂಬರ್ 26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ