ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಇತಿಹಾಸದಲ್ಲೇ ಇಂಥದ್ದೊಂದು ಪ್ರಯೋಗ ನಡೆಯುತ್ತಿರುವುದು ಇದೇ ಮೊದಲು. ಈ ವರ್ಷದಿಂದಲೇ ಇದನ್ನು ಚಾಲ್ತಿಯಲ್ಲಿ ತರಬೇಕಿತ್ತು. ಆದರೆ ಕರೊನಾ ಕಾರಣದಿಂದ ಇದನ್ನು ಮುಂದೂಡಲಾಗಿದೆ. ಸಾಧಕರನ್ನು ಗುರುತಿಸುವುದು ಈ ವರ್ಷ ಸ್ವಲ್ಪ ಕಷ್ಟವಾಯಿತು. ಆದ್ದರಿಂದ ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್