ಬೆಂಗಳೂರು : ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಜಾರಿಗೆ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಧರ್ಮಗುರುಗಳ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದ್ದು, ಧರ್ಮಾತೀತವಾಗಿ ಎಲ್ಲಾ ಗುರುಗಳು ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಜಾರಿಯಾಗಬೇಕು ಎಂದು ಸಲಹೆ ನೀಡಿದ್ದಾರೆ.ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಸರ್ಕಾರದ ನಿರ್ಧಾರಕ್ಕೆ ಧರ್ಮಾತೀತವಾಗಿ ಧರ್ಮಗುರುಗಳು ಸಹಮತ ವ್ಯಕ್ತಪಡಿಸಿದರು. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮಠಾಧೀಶರು, ಧರ್ಮಗುರುಗಳು, ಶಿಕ್ಷಣ ತಜ್ಞರ ದುಂಡು