ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಪಿಡಿಪಿಯೊಂದಿಗಿನ ಮೈತ್ರಿ ಕಡಿದುಕೊಂಡು ಸಮ್ಮಿಶ್ರ ಸರ್ಕಾರಕ್ಕೆ ಗುಡ್ ಬೈ ಹೇಳಿದ್ದರ ಕಾರಣ ಬಯಲಾಗಿದೆ. ಇಲ್ಲಿ ರಾಜ್ಯಪಾಲರ ಆಡಳಿತ ಬಂದ ಮೇಲೆ ಸೇನೆ ಜಮಾವಣೆ ಹೆಚ್ಚಿದ್ದು, ಉಗ್ರರ ದಮನಕ್ಕೆ ವೇದಿಕೆ ಸಿದ್ಧವಾಗುತ್ತಿದೆ.ಕಾಶ್ಮೀರಕ್ಕೆ ಹೆಚ್ಚುವರಿಯಾಗಿ ಸ್ನೈಪರ್, ಎನ್ ಎಸ್ ಜಿ ಕಮಾಂಡೋಗಳ ರವಾನೆಯಾಗಿದೆ. ಶ್ರೀನಗರದಲ್ಲಿ ಎನ್ ಎಸ್ ಜಿ ಕೇಂದ್ರದಲ್ಲಿ ಸೈನಿಕರಿಗೆ ತರಬೇತಿ ನೀಡಲಾಗುತ್ತಿದೆ.ಇದರೊಂದಿಗೆ ಕಣಿವೆ ರಾಜ್ಯದಲ್ಲಿ ಮಿತಿ ಮೀರಿರುವ ಉಗ್ರರನ್ನು ಮಟ್ಟ ಹಾಕಲು ಕೇಂದ್ರ