ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ನ ಪ್ರಬಲ ನಾಯಕರಾದ ಜಾರಕಿಹೊಳಿ ಸಹೋದರರು ತಾವು ಬಿಜೆಪಿ ಸೇರುತ್ತಿಲ್ಲ, ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ತರಲ್ಲ ಎಂದು ಹೊರಗೆ ಹೇಳಿಕೊಳ್ಳುತ್ತಿದ್ದರೂ ಒಳಗೊಳಗೇ ಬಂಡಾಯಕ್ಕೆ ಭಾರೀ ಸಿದ್ಧತೆಯನ್ನೇ ಮಾಡಿಕೊಂಡಿದ್ದಾರೆ.ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವೇಳೆ ರಮೇಶ್ ಜಾರಕಿಹೊಳಿ ತಮ್ಮ ಸಮಸ್ಯೆ ಬಗೆಹರಿಸಲು ಸ್ವತಃ ರಾಹುಲ್ ಗಾಂಧಿಯವರೇ ಮಧ್ಯಪ್ರವೇಶಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ತಮ್ಮ ಬೆಂಬಲಿತ 18