ಬೆಂಗಳೂರು: ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ನಟ ಕಮಲ್ ಹಾಸನ್ ಇಂದು ಬೆಳಿಗ್ಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿಗೆ ಆಗಮಿಸುತ್ತಿದ್ದಾರೆ.ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ಕಮಲ್ ಹಾಸನ್ ಗೆ ತಮ್ಮ ಪ್ರಮಾಣ ವಚನ ಸಮಾರಂಭಕ್ಕೂ ಖುದ್ದು ಎಚ್ ಡಿಕೆ ಆಹ್ವಾನ ನೀಡಿದ್ದರು. ಆದರೆ ಆ ಸಂದರ್ಭದಲ್ಲಿ ಕಮಲ್ ಖುದ್ದಾಗಿ ಬಂದಿರಲಿಲ್ಲ.ಇದೀಗ ರಾಜಕೀಯ ವಿಚಾರಗಳನ್ನು ಚರ್ಚಿಸಲೆಂದೇ ಕಮಲ್ ಬೆಂಗಳೂರಿಗೆ ಬರುತ್ತಿದ್ದಾರೆ. ತಮಿಳು ನಾಡು ಮತ್ತು ಕರ್ನಾಟಕದ ಬಾಂಧವ್ಯ ಚೆನ್ನಾಗಿರಬೇಕು.