ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ತನ್ನ ಸಚಿವರಿಗೆ ಖಡಕ್ ಸೂಚನೆಯೊಂದನ್ನು ರವಾನಿಸಿದೆ. ಇನ್ಮುಂದೆ ಸಚಿವರು ಬಹಿರಂಗವಾಗಿ ರಾಜಕೀಯ ವಿಚಾರಗಳ ಬಗ್ಗೆ ಹೇಳಿಕೆ ಕೊಡುವಂತಿಲ್ಲ ಎಂದು ಖಡಕ್ ಸೂಚನೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ನೀಡಿದ್ದಾರೆ.