ಬೆಂಗಳೂರು: ಜೆಡಿಎಸ್ ನವರಿಗೆ ಐದು ವರ್ಷ ಸಿಎಂ ಪಟ್ಟ ಬಿಟ್ಟುಕೊಟ್ಟಿರುವುದಕ್ಕೆ ತಮಗೆ ಅಸಮಾಧಾನವಿದೆ ಎಂಬ ವರದಿಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.ಕುಮಾರಸ್ವಾಮಿಯೇ ಐದು ವರ್ಷದ ಅವಧಿಗೆ ಸಿಎಂ ಆಗಿರುವುದಕ್ಕೆ ನನಗೇನೂ ಬೇಸರವಿಲ್ಲ. ಈ ಬಗ್ಗೆ ವೇಣುಗೋಪಾಲ್ ಬಳಿ ನಾನು ಚರ್ಚಿಸಿಯೂ ಇಲ್ಲ. ಸುಮ್ಮನೇ ನನ್ನ ಹೆಸರು ಎಳೆದು ತರಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅಷ್ಟೇ ಅಲ್ಲದೆ, ಕುಮಾರಸ್ವಾಮಿ ಐದು ವರ್ಷದ ಅವಧಿಗೆ ಸಿಎಂ ಆಗುವುದಕ್ಕೆ